ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ: ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳ ಅಮಾನತು
ಬೆಂಗಳೂರು: ರಾತ್ರಿ 11 ಗಂಟೆ ನಂತರ ಓಡಾಡಿದ್ದರು ಎಂಬ ಕಾರಣಕ್ಕೆ ದಂಪತಿಯಿಂದ ದಂಡದ ರೂಪದಲ್ಲಿ ಹಣ ವಸೂಲಿ ಮಾಡಿದ್ದ ಪೊಲೀಸರು ಅಮಾನತುಗೊಂಡ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಅದೇ ಮಾದರಿಯಲ್ಲಿ ಮತ್ತೊಂದು ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಸಾರ್ವಜನಿಕರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಲಾಗಿದೆ.
ಆಡುಗೋಡಿ ಠಾಣೆ ಕಾನ್ಸ್ಟೇಬಲ್ಗಳಾದ ಅರವಿಂದ್ ಮತ್ತು ಮಾಳಪ್ಪ ಬಿ.ವಾಲಿಕಾರ್ ಅಮಾನತಾದ ಪೊಲೀಸ್ ಪೇದೆಗಳು.




