ಮೊಟ್ಟೆ, ಚಿಕನ್ ರೋಲ್ ಕೊಡದಕ್ಕೆ ಹೋಟೆಲ್ ಸಿಬ್ಬಂದಿ ತಂಗಿದ್ದ ರೂಮಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಬೆಂಗಳೂರು: ಹೋಟೆಲ್ನಲ್ಲಿ ಊಟದ ವಿಚಾರವಾಗಿ ಆರಂಭವಾದ ಜಗಳದಿಂದ ಕೋಪಗೊಂಡಿದ್ದ ಕೆಲ ಕಿಡಿಗೇಡಿಗಳು ಹೋಟೆಲ್ ಸಿಬ್ಬಂದಿ ತಂಗಿದ್ದ ರೂಮಿಗೆ ಬೆಂಕಿ ಹಚ್ಚಿರುವ ಘಟನೆ ಭಾನುವಾರ ರಾತ್ರಿ ಹನುಮಂತನಗರದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು ಅಪ್ರಾಪ್ತ ಬಾಲಕ ಸೇರಿದಂತೆ ಇಬ್ಬರನ್ನು ಬಂಧಿನಕ್ಕೊಳಪಡಿಸಿದ್ದಾರೆ.
ಎನ್.ಆರ್.ಕಾಲೋನಿ ನಿವಾಸಿ ಮೇಸ್ತ್ರಿ ದೇವರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದು, 15 ವರ್ಷದ ಬಾಲಕನ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಂಡಿದ್ದಾರೆ.
ದೇವರಾಜು, ಆತನ ಸ್ನೇಹಿತ ಗಣೇಶ್ ಮತ್ತು ಬಾಲಕ ಭಾನುವಾರ ರಾತ್ರಿ 11 ಗಂಟೆ ಸುಮಾರಿಗೆ ಅಶೋಕನಗರ 3ನೇ ಕ್ರಾಸ್ನಲ್ಲಿರುವ ಕುಮಾರ್ ಹೋಟೆಲ್ಗೆ ಹೋಗಿ ಮೊಟ್ಟೆ ಮತ್ತು ಚಿಕನ್ ರೋಲ್ ಕೇಳಿದ್ದಾರೆ. ಆದರೆ, ಈ ಹೊತ್ತಿನಲ್ಲಿ ಹೋಟೆಲ್ ಮುಚ್ಚಿದ್ದ ಸಿಬ್ಬಂದಿಗಳು ಊಟ ಎಲ್ಲವೂ ಖಾಲಿಯಾಗಿದೆ ಎಂದು ಹೇಳಿದ್ದಾರೆ.




