ಹಾಸ್ಟೆಲ್ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಬನ್ನೇರುಘಟ್ಟ ಸಮೀಪದ ಎಎಮ್ಸಿ ಎಂಜಿನಿಯರಿಂಗ್ ಕಾಲೇಜಿಗೆ ಸೇರಿದ ಹಾಸ್ಟೆಲ್ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕೇರಳ ಮೂಲದ ನಿತಿನ್ (19) ಆತ್ಮಹತ್ಯೆಗೆ ಶರಣಾದವನು.
ಸಿಎಸ್ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದ ನಿತಿನ್ ಡಿ.1ರಂದು ಕಾಲೇಜು ಸೇರಿದ್ದ. ಡಿ.14ರಂದು ಮಧ್ಯಾಹ್ನ ಹಾಸ್ಟೆಲ್ ಶೌಚಾಲಯದಲ್ಲಿ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. ಇತ್ತ ನಿತಿನ್ ಹಲವು ಹೊತ್ತಿನ ಬಳಿಕವೂ ಶೌಚಾಲಯದಿಂದ ರೂಂಗೆ ಬಾರದ ಹಿನ್ನೆಲೆಯಲ್ಲಿ ಸಹಪಾಠಿಗಳು ವಾರ್ಡನ್ಗೆ ಮಾಹಿತಿ ನೀಡಿದ್ದರು.




