September 20, 2024

ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಮಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿಕೆ

0

ಮಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿದ ಹೇಳಿಕೆಯನ್ನು ಬಿಜೆಪಿಯವರು ತಮ್ಮ ರಾಜಕೀಯಕ್ಕೆ ಬೇಕಂತೆ ತಿರುಚಿದ್ದಾರೆ. ಅವರು ಆ ರೀತಿ ಹೇಳಿಕೆ ನೀಡಿಯೇ ಇಲ್ಲ. ಅವರು ಭಯೋತ್ಪಾದನೆಯನ್ನು ನಾವು ಬೆಂಬಲಿಸುತ್ತೇವೆ ಅಂತ ಹೇಳಿದ್ದಾರಾ…? ಎಂದು ಮಾಜಿ ಮುಖ್ಯಮಂತ್ರಿ, ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಂಗಳೂರು ಏರ್‌ಪೋರ್ಟಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಡಿಕೆಶಿ ಪರ ಬ್ಯಾಟಿಂಗ್ ಮಾಡಿದರು. ಬಿಜೆಪಿಯವರಿಗೆ ಇಂತಹ ಹೇಳಿಕೆಗಳೇ ಬೇಕಾಗಿರೋದು. ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿಯವರು ರಾಜಕೀಯಕ್ಕೆ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಅದು ಬಿಟ್ಟು ಭಯೋತ್ಪಾದನೆಗೆ ಸಹಕಾರ ನೀಡುತ್ತೇನೆಂದು ಹೇಳಿದ್ದಾರೆಯೇ?. ಬಿಜೆಪಿಯವರು ಅದನ್ನು ಅನುಕೂಲಕ್ಕೆ ತಕ್ಕಂತೆ ತಿರುಚಿ ಜನಗಳ ಮುಂದೆ ತಪ್ಪು ಮಾಹಿತಿ ನೀಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು. ದೇಶದಲ್ಲಿ ಭಯೋತ್ಪಾದನೆ ಇದ್ದರೆ ಬಿಜೆಪಿಯವರು ಹತ್ತಿಕ್ಕಲಿ. ಅವರಿಗೆ ಅಧಿಕಾರವಿದೆ, ಡಬಲ್ ಇಂಜಿನ್ ಸರಕಾರವಿದೆ, ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 9 ವರ್ಷವಾಯಿತ್ತಲ್ಲಾ.. ಭಯೋತ್ಪಾದನೆಯನ್ನು ಹತ್ತಿಕ್ಕಲಿ ಎಂದರು.

Leave a Reply

Your email address will not be published. Required fields are marked *

error: Content is protected !!