ಮೈಸೂರು: ತಾಯಿಯ ಅಕ್ರಮ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆ
ಮೈಸೂರು: ನಂಜನಗೂಡು ತಾಲ್ಲೂಕಿನ ಹುಣಸನಾಳು ಗ್ರಾಮದಲ್ಲಿ ತಾಯಿಯ ಅಕ್ರಮ ಸಂಬಂಧದಿಂದ ಮನನೊಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಹೇಂದ್ರ (20) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವಕ.
ತನ್ನ ತಾಯಿಯ ಅಕ್ರಮ ಸಂಬಂಧದ ವಿಚಾರವಾಗಿ ಆಗಾಗ್ಗೆ ಮನೆಯಲ್ಲಿ ತಂದೆ-ತಾಯಿ ನಡುವೆ ಗಲಾಟೆ ಆಗುತ್ತಿತ್ತು. ಇದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಮಹೇಂದ್ರ ನೇಣಿಗೆ ಶರಣಾಗಿದ್ದಾನೆ.
ವಿಷಯ ತಿಳಿದು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.




