ದೇರಳಕಟ್ಟೆ: ಇಸ್ತ್ರಿಪೆಟ್ಟಿಗೆಯಿಂದ ಹಾಸಿಗೆಗೆ ಬೆಂಕಿ: ಸಮಯ ಪ್ರಜ್ಞೆಯಿಂದ ತಪ್ಪಿದ ಅವಘಡ
ಉಳ್ಳಾಲ: ದೇರಳಕಟ್ಟೆಯ ಫ್ಲ್ಯಾಟ್ವೊಂದರಲ್ಲಿ ಬಿಸಿಯಾಗಿದ್ದ ಇಸ್ತ್ರಿ ಪೆಟ್ಟಿಗೆಯಿಂದ ಹಾಸಿಗೆಗೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಫ್ಲ್ಯಾಟ್ ಮ್ಯಾನೇಜರ್ನ ಸಮಯಪ್ರಜ್ಞೆಯಿಂದಾಗಿ ಅವಘಡ ತಪ್ಪಿದೆ.
ದೇರಳಕಟ್ಟೆ ಕ್ಷೇಮ ಆಸ್ಪತ್ರೆ ಬಳಿಯಿರುವ ಫ್ಲಾಮ ನೆಸ್ಟ್ ಫ್ಲ್ಯಾಟ್ನಲ್ಲಿ ಈ ಅವಘಡ ಸಂಭವಿಸಿದೆ. ಇಲ್ಲಿಯ ರೂಂವೊಂದರಲ್ಲಿ ವಾಸಿಸುತ್ತಿರುವ ದಂತ ವೈದ್ಯಕೀಯ ವಿದ್ಯಾರ್ಥಿನಿಯರಿಬ್ಬರು ಮಂಗಳವಾರ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರವಿದೆಯೆಂದು ಬಟ್ಟೆಗೆ ಇಸ್ತ್ರಿ ಮಾಡಿ ಬೇಗನೇ ಕಾಲೇಜಿಗೆ ತೆರಳಿದ್ದರು.
ಇಸ್ತ್ರಿ ಹಾಕಿದ ಬಳಿಕ ಸ್ವಿಚ್ ಆಫ್ ಮಾಡಿ ಬಿಸಿಯಾಗಿದ್ದ ಇಸ್ತ್ರಿಪೆಟ್ಟಿಗೆಯನ್ನು ಮಲಗುವ ಹಾಸಿಗೆಯ ಮೇಲೆಯೇ ಇಟ್ಟು ಹೋಗಿದ್ದರು.




