ಪತ್ರಕರ್ತ ಸಿದ್ದಿಕ್ ಕಪ್ಪನ್ ಗೆ ಜಾಮೀನು
ಲಕ್ನೋ: ಹತ್ರಸ್ ನಲ್ಲಿ ನಡೆದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣವನ್ನು ವರದಿ ಮಾಡಲು ತೆರಳಿದ್ದ ವೇಳೆ ಬಂಧಿತರಾಗಿ ಜೈಲಿನಲ್ಲಿ 2 ವರ್ಷಗಳನ್ನು ಕಳೆದ ನಂತರ ಕೇರಳದ ಪತ್ರಕರ್ತ ಸಿದ್ದಿಕ್ ಕಪ್ಪನ್ ಜಾಮೀನು ಪಡೆದಿದ್ದಾರೆ.
ಯುಎಪಿಎ ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ದಾಖಲಾದ ಭಯೋತ್ಪಾದನೆ ಪ್ರಕರಣದಲ್ಲಿ ಪತ್ರಕರ್ತ ಸಿದ್ದೀಕ್ ಕಪ್ಪನ್ ಸೆಪ್ಟೆಂಬರ್ನಲ್ಲಿ ಸುಪ್ರೀಂ ಕೋರ್ಟ್ನಿಂದ ಈಗಾಗಲೇ ಜಾಮೀನು ಪಡೆದಿದ್ದರು.




