ಕಾಸರಗೋಡು: ನೀರು ತುಂಬಿದ್ದ ಬಕೆಟ್ನೊಳಗೆ ಬಿದ್ದು 11 ತಿಂಗಳ ಮಗು ಸಾವು
ಕಾಸರಗೋಡು: ನೀರು ತುಂಬಿದ್ದ ಬಕೆಟ್ ನೊಳಗೆ ಬಿದ್ದು 11 ತಿಂಗಳ ಮಗು ಮೃತಪಟ್ಟ ದಾರುಣ ಘಟನೆ ಅಂಬಲತ್ತರ ದ ಏಳನೇ ಮೈಲ್ ನಲ್ಲಿ ನಡೆದಿದೆ.
ಅಬ್ದುಲ್ ಜಬ್ಬಾರ್ ರವರ ಪುತ್ರ ಮುಹಮ್ಮದ್ ರಿಸಾಯ್ ಮೃತಪಟ್ಟ ಮಗು.
ಮನೆಯ ಜಗಲಿಯಲ್ಲಿ ದಲ್ಲಿ ನೀರು ತುಂಬಿಸಿ ಟ್ಟಿದ್ದ ಬಕೆಟ್ ನೊಳಗೆ ಬಿದ್ದು ಈ ದುರ್ಘಟನೆ ನಡೆದಿದೆ.
ಜಗಲಿಯಲ್ಲಿ ಆಟವಾಡುತ್ತಿದ್ದ ಮಗು ತಾಯಿ ಅಡುಗೆ ಕೋಣೆಗೆ ತೆರಳಿ ಮರಳಿದಾಗ ನಾಪತ್ತೆಯಾಗಿದ್ದು, ಹುಡುಕಾಡಿದಾಗ ಬಕೆಟ್ ನಲ್ಲಿ ಬಿದ್ದಿರುವುದು ಕಂಡು ಬಂದಿದೆ.
ಕೂಡಲೇ ಸಮೀಪದ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.





