ಕಾಸರಗೋಡು: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಯುವಕ ಮೃತ್ಯು
ಕಾಸರಗೋಡು: ವಿಷ ಸೇವನೆಯಿಂದ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆ ಗೆ ದಾಖಲಿಸಲಾಗಿದ್ದ ಕಾರ್ಮಿಕ ರೋರ್ವರು ಮೃತಪಟ್ಟ ಘಟನೆ ಉಪ್ಪಳ ಮಂಗಲ್ಪಾಡಿಯಲ್ಲಿ ನಡೆದಿದೆ.
ಮಂಗಲ್ಪಾಡಿ ಕೃಷ್ಣ ನಗರದ ತೇಜಸ್ ಕುಮಾರ್ (23) ಮೃತಪಟ್ಟವರು.
ಡಿ.21 ರಂದು ಸಂಜೆ ಮನೆಯಲ್ಲಿ ಇಲಿ ವಿಷ ಸೇವಿಸಿದ್ದು, ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.




