December 15, 2025

ಸೀರೆಯ ಜೋಕಾಲಿಯಲ್ಲಿ ಆಟವಾಡುತ್ತಿದ್ದಾಗ ಉಸಿರುಗಟ್ಟಿ ಬಾಲಕ ಸಾವು

0
image_editor_output_image781036688-1672478101368.jpg

ಮಂಡ್ಯ: ಶಾಲೆ ಮುಗಿಸಿಕೊಂಡು ಮನೆಗೆ ಬಂದ 9 ವರ್ಷದ ಬಾಲಕನೊಬ್ಬ ಸೀರೆಯ ಜೋಕಾಲಿಯಲ್ಲಿ ಆಟವಾಡಲು ಹೋಗಿ ದುರಂತ ಅಂತ್ಯಕಂಡ ಘಟನೆ ಮಂಡ್ಯ ಕಿಕ್ಕೇರಿ ಸಮೀಪದ ಬೇವಿನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ.

ಬೇವಿನಹಳ್ಳಿ ಕೊಪ್ಪಲು ಗ್ರಾಮದ ಶ್ರೀನಿವಾಸ ಅವರ ಪುತ್ರ ಸಮರ್ಥ್(9) ಮೃತ ಬಾಲಕ.

ಗುರುವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಸಮರ್ಥ್ ಬಂದಿದ್ದ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ. ಜೋಕಾಲಿ ಆಟವಾಡಬೇಕು ಅನ್ನಿಸಿ, ಅಮ್ಮನ ಸೀರೆ ತೆಗೆದುಕೊಂಡು ಈತನೇ ಜೋಲಿ ಕಟ್ಟಿದ್ದಾನೆ. ಅದೇ ಇವನ ಪಾಲಿಗೆ ಉರುಳಾಗಿ ಪ್ರಾಣ ತೆಗೆದಿದೆ.

ಜೋಲಿ ಕಟ್ಟಿ ಅದರೊಳಗೆ ಕುಳಿತು ಆಟವಾಡಲು ಸಮರ್ಥ್ ಹೋಗಿದ್ದಾನೆ. ಈ ವೇಳೆ ಜೋಕಾಲಿಯ ಬಟ್ಟೆ ಸುರುಳಿ ಸುತ್ತಿಕೊಂಡ ಪರಿಣಾಮ ಉಸಿರುಗಟ್ಟಿ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!