ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಸಹೋದರನ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
ಕಲಬುರಗಿ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯನ ಸಹೋದರ ಚನ್ನವೀರ ಪಾಟೀಲ್ ಅವರ ಮೇಲೆ ಐದಾರು ದುಷ್ಕರ್ಮಿಗಳಿಂದ ಏಕಕಾಲಕ್ಕೆ ಗುಂಡಿನ ದಾಳಿ ನಡೆದಿದೆ.
ಕಲಬುರಗಿ ನಗರದ ಆಳಂದ ಚೆಕ್ಪೋಸ್ಟ್ ಬಳಿ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಚನ್ನವೀರ ಪಾಟೀಲ್ ಕೈಗೆ ಗುಂಡು ತಗುಲಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಲೇರೋ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚನ್ನವೀರ ಪಾಟೀಲ್ ಹಾಗೂ ಜೊತೆಗಿದ್ದ ಹುಡುಗನ ಮೇಲೂ ಗುಂಡಿನ ದಾಳಿ ನಡೆಸಿದ್ದಾರೆ




