ಮನೆ ಮುಂದೆ ನಿಲ್ಲಿಸಿದ್ದ ಕಾರಿಗೆ ದುಷ್ಕರ್ಮಿಗಳಿಂದ ಬೆಂಕಿ
ಬೆಂಗಳೂರು: ಜೆ.ಸಿ.ನಗರದಲ್ಲಿ ಮನೆ ಮುಂದೆ ನಿಲ್ಲಿಸಿದ್ದ ಮಹೇಂದ್ರಾ ಟಿಯುವಿ 300 ಕಾರಿಗೆ ದುಷ್ಕರ್ಮಿಯೊಬ್ಬ ಭಾನುವಾರ ನಸುಕಿನಲ್ಲಿ ಬೆಂಕಿ ಹಚ್ಚಿ ಪರಾರಿಯಾಗಿದ್ದು, ಕಾರು ಭಾಗಶಃ ಸುಟ್ಟಿದೆ.
‘ಸ್ಥಳೀಯ ನಿವಾಸಿ ಸುಬ್ರಹ್ಮಣ್ಯ ದೂರು ನೀಡಿದ್ದಾರೆ. ‘ಮೂರು ತಿಂಗಳ ಹಿಂದೆ ಸುಬ್ರಹ್ಮಣ್ಯ ಅವರ ಬೈಕ್ಗೂ ಬೆಂಕಿ ಹಚ್ಚಿದ್ದರು. ಹಳೇ ವೈಷಮ್ಯ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ’ ಎಂದು ಮಹಾಲಕ್ಷ್ಮಿ ಲೇಔಟ್ ಠಾಣೆ ಪೊಲೀಸರು ತಿಳಿಸಿದರು.




