ಪ್ರಧಾನಿ ಮೋದಿ ಆಗಮಿಸುವ ಪಾದಚಾರಿ ಮಾರ್ಗಗಳಿಗೆ ತ್ರಿವರ್ಣ ಬಣ್ಣ: ವ್ಯಾಪಕ ಆಕ್ರೋಶ
ಇಂದೋರ್: 17ನೇ ಪ್ರವಾಸಿ ಭಾರತೀಯ ದಿನದ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಮಧ್ಯಪ್ರದೇಶದ ಇಂದೋರ್ ನಗರ ಸಜ್ಜಾಗಿದೆ.
ಈ ಮಧ್ಯೆ, ಹೂಡಿಕೆದಾರರು ಮತ್ತು ಎನ್ಆರ್ಐ ಶೃಂಗಸಭೆಯ ಪೂರ್ವಭಾವಿ ಸಿದ್ಧತೆಗಳನ್ನು ವಿವರಿಸುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಪಾದಚಾರಿ ಮಾರ್ಗಕ್ಕೆ ತ್ರಿವರ್ಣ ಬಳಿದಿರುವುದು ಆ ವಿಡಿಯೊದಲ್ಲಿ ದಾಖಲಾಗಿದೆ. ಜನ ಈ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಸ್ಥಳೀಯಾಡಳಿತ ಮತ್ತು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.




