March 27, 2026

ತೆರೆದ ಸಂಪನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು

0
image_editor_output_image-304086867-1673341020784.jpg

ಸವದತ್ತಿ (ಬೆಳಗಾವಿ ಜಿಲ್ಲೆ): ಸವದತ್ತಿ ತಾಲ್ಲೂಕಿನ ಗುರ್ಲಹೊಸೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ, ವಾಲ್ಮೀಕಿ ಭವನ ನಿರ್ಮಿಸಲು ತೆರೆದ ಸಂಪನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಶಂಭುಲಿಂಗಪ್ಪ ಗುಡಿ ಅವರ ನಾಲ್ಕು ವರ್ಷದ ಪುತ್ರ ಶ್ಲೋಕ ಹಾಗೂ ಪ್ರಕಾಶ ಸಾಲುಂಕೆ ಅವರ ನಾಲ್ಕು ವರ್ಷದ ಪುತ್ರ ಚಿದಾನಂದ ಸಾವನ್ನಪ್ಪಿದ ಮಕ್ಕಳು.

ಶ್ರೋಕ ಮತ್ತು ಚಿದಾನಂದ

ಸವದತ್ತಿ ಸಮೀಪದ ಗುರ್ಲ ಹೊಸೂರಿನಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗುತ್ತಿದೆ. ಇದಕ್ಕೆ ನೀರು ಪೂರೈಸಲು ದೊಡ್ಡ ಸಂಪ ಕಟ್ಟಿ ಹಾಗೇ ಬಾಡಲಾಗಿದೆ.

ಶ್ಲೋಕ ಹಾಗೂ ಚಿದಾನಂದ ಆಟವಾಡುತ್ತ ಹೋಗಿ ಸಂಪಿನಲ್ಲಿ ಬಿದ್ದರು. ಈ ಸಂಪ ಎರಡು ಕಟ್ಟಡಗಳ ಸಣ್ಣ ಸಂದಿಯಲ್ಲಿ ಇರುವ ಕಾರಣ ಮಕ್ಕಳು ಬಿದ್ದಿದ್ದನ್ನು ಯಾರೂ ಗಮನಿಸಿಲ್ಲ.

Leave a Reply

Your email address will not be published. Required fields are marked *

error: Content is protected !!