ಬಿಹಾರ ಸಚಿವ ಚಂದ್ರಶೇಖರ್ ನಾಲಿಗೆ ಕತ್ತರಿಸಿದರೆ 10 ಕೋಟಿ ರೂ. ಬಹುಮಾನ: ಅಯೋಧ್ಯೆ ಧರ್ಮಗುರು ಪರಮಹಂಸ ಆಚಾರ್ಯ
ಅಯೋಧ್ಯೆ: ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ಕೂಡಲೇ ನಿತೀಶ್ ಕುಮಾರ್ ಸರ್ಕಾರ ವಜಾಗೊಳಿಸಬೇಕು ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಒತ್ತಾಯಿಸಿದ್ದಾರೆ.
“ಬಿಹಾರದ ಶಿಕ್ಷಣ ಸಚಿವರು ರಾಮಚರಿತ ಮಾನಸ ಪುಸ್ತಕವನ್ನು ದ್ವೇಷವನ್ನು ಹರಡುವ ಪುಸ್ತಕ ಎಂದು ಬಣ್ಣಿಸಿರುವ ರೀತಿಯಿಂದ ಇಡೀ ದೇಶಕ್ಕೆ ನೋವಾಗಿದೆ. ಇದು ಎಲ್ಲಾ ಸನಾತನಿಗೆ ಅವಮಾನವಾಗಿದೆ ಮತ್ತು ಈ ಹೇಳಿಕೆಗಾಗಿ ನಾನು ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇನೆ.
ಒಂದು ವಾರದೊಳಗೆ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು, ಅವರು ಕ್ಷಮೆಯಾಚಿಸಬೇಕು. ಒಂದು ವೇಳೆ ಇದಾಗದಿದ್ದರೆ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ಘೋಷಿಸುತ್ತೇನೆ” ಎಂದು ಅವರು ಹೇಳಿದ್ದಾರೆ.




