December 19, 2025

ಬಂಟ್ವಾಳ: ಎಸ್ಡಿಪಿಐ ರಂಗೇಲ್ ಬೂತ್ ಸಮಿತಿ ಕಾರ್ಯಕರ್ತರ ಸಭೆ, ಪಕ್ಷ ಸೇರ್ಪಡೆ ಕಾರ್ಯಕ್ರಮ

0
image_editor_output_image1757857236-1637046161311.jpg

ಬಂಟ್ವಾಳ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಪುರಸಭೆ ಸಮಿತಿಯ ರಂಗೇಲ್ ಬೂತ್ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು

ರಂಗೇಲ್ ಬೂತ್ ಸಮಿತಿ ವತಿಯಿಂದ ಕಾರ್ಯಕರ್ತರ ಸಭೆ ಮತ್ತು ಪಕ್ಷ‍ ಸೇರ್ಪಡೆಯು ರಂಗೇಲ್ ಬೂತ್ ಸಮಿತಿ ಅಧ್ಕಕ್ಷ ಅಝರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮುಖ್ಯ ಭಾಷಣಗಾರರಾಗಿ ಆಗಮಿಸಿದ ರಾಜ್ಯ ಸಮಿತಿ ಸದಸ್ಯ ರಿಯಾಝ್ ಕಡಂಬು ಪಕ್ಷದ ತತ್ವ ಸಿಧ್ದಾಂತದ ಬಗ್ಗೆ ವಿವರಿಸಿದರು. ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್ ಎಸ್ ಎಚ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸಮಾರೋಪ ಭಾಷಣವನ್ನು ಬಂಟ್ವಾಳ ಪುರ ಸಭೆ ಸಮಿತಿ ಅಧ್ಯಕ್ಷ ಶರೀಫ್ ವಳವೂರು ನಡೆಸಿಕೊಟ್ಟರು . ಈ ಸಂಧರ್ಭದಲ್ಲಿ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿಕೊಂಡು ಹಲವಾರು ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು. ರಂಗೇಲ್ ಬೂತ್ ಸಮಿತಿಯ ಕಾರ್ಯದರ್ಶಿ ಅಶ್ರಫ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!