ಹಲವು ಪ್ರಕರಣಗಳ ಆರೋಪಿ ಸ್ಯಾಂಟ್ರೊ ರವಿ ಬಂಧನ
ಬೆಂಗಳೂರು: ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ಸುಮಾರು 11 ದಿನಗಳಿಂದ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ನಲ್ಲಿ ಕರ್ನಾಟಕ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ದೊರಕಿದೆ.
ಮೂಲತಃ ಮೈಸೂರಿನವನಾಗಿರುವ ಕೆ.ಎಸ್.ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಈ ಹಿಂದೆ ಹಲವೆಡೆ ಪ್ರಕರಣ ದಾಖಲಾಗಿದೆ.
ವೇಶ್ಯಾವಾಟಿಕೆ ದಂಧೆಯಲ್ಲಿ ಪಿಂಪ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ಪ್ರಭಾವಿ ರಾಜಕಾರಣಿಗಳ ಸಂಪರ್ಕ ಇದೆ ಎನ್ನಲಾಗುತ್ತಿದೆ.




