ಮಂಗಳೂರು: ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಮಂಗಳೂರು: ಹದಿನೇಳು ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕುಲಶೇಖರ ವ್ಯಾಪ್ತಿಯಲ್ಲಿ ನಡೆದಿದೆ.
ವಿನುತಾ ಹಾಗೂ ಲಾಯ್ ನೊರೊನ್ಹಾ ಅವರ ಪುತ್ರ ವೆರ್ನನ್ ನಗರದ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿದ್ದ. ಆದರೆ, ಶನಿವಾರ ಏಕಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಿಖರ ಕಾರಣ ತಿಳಿದು ಬಂದಿಲ್ಲ. ವೈಯುಕ್ತಿಕ ವಿಚಾರಕ್ಕೆ ಸಂಬಂಧಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಹೇಳಲಾಗಿದೆ.
ಮೃತನ ಅಂತ್ಯಕ್ರಿಯೆ ರವಿವಾರ ಮಧ್ಯಾಹ್ನ 2 ಗಂಟೆಗೆ ಕುಲಶೇಖರ ಚರ್ಚ್ ನಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.




