ಬೆಂಗಳೂರು: ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಮಂಜುನಾಥ್ ಕೆ.ಎಸ್. ಅಲಿಯಾಸ್ ಸ್ಯಾಂಟ್ರೊ ರವಿ ದೂರುಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಸರಕಾರ ಸಿಐಡಿ ಪೊಲೀಸರಿಗೆ ನಿರ್ದೇಶನ ನೀಡಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.