ಕಾರವಾರ: ಸಮುದ್ರದಲ್ಲಿ ಬಂಡೆಕಲ್ಲಿಗೆ ತಾಗಿ ಮೀನುಗಾರಿಕೆಯ ಬೋಟ್ ಪಲ್ಟಿ
ಕಾರವಾರ: ಅರಬ್ಬೀ ಸಮುದ್ರದಲ್ಲಿ ಬಂಡೆಕಲ್ಲಿಗೆ ತಾಗಿ ಮುಳುಗುತ್ತಿದ್ದ ಬೋಟ್ನಿಂದ 17 ಜನ ಮೀನುಗಾರರ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಸಮೀಪದ ಕಡ್ಲೆ ಬಳಿ ನಡೆದಿದೆ
ಆಳ ಸಮುದ್ರದಲ್ಲಿ 17 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದ ಶ್ರೀದೇವಿ ಅನುಗ್ರಹ ಹೆಸರಿನ ಸುಧಾಕರ್ ಕಾರ್ವಿ ಅವರ ಮಾಲೀಕತ್ವದ ಪರ್ಶಿಯನ್ ಬೋಟ್ ಇದಾಗಿದ್ದು, ಮೀನು ಹಿಡಿದುಕೊಂಡು ವಾಪಸ್ಸಾಗುತ್ತಿದ್ದಾಗ ಘಟನೆ ನಡೆದಿದೆ.




