ಚಿಕ್ಕಮಗಳೂರು: ವೇಗವಾಗಿ ಹೋಗುತ್ತಿದ್ದ ಕಾರು ಮರಕ್ಕೆ ಡಿಕ್ಕಿ ಹೊಡೆದು ಮೆಸ್ಕಾಂನ ಕಿರಿಯ ಇಂಜಿನಿಯರ್ (ಜೆಇ) ಸೇರಿ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಅಜ್ಜಂಪುರದ ಮಾಕನಹಳ್ಳಿಯಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಮೂಲದ ಕಿರಣ್(32) ಹಾಗೂ ಅಜ್ಜಂಪುರ ತಾಲೂಕಿನ ಶಿವನಿ ಮೂಲದ ನಾಗರಾಜ್ (40) ಮೃತರು ಎಂದು ತಿಳಿದುಬಂದಿದೆ.