ಮೈದಾನಕ್ಕೆ ಬಂದು ರೋಹಿತ್ ಶರ್ಮಾರನ್ನು ತಬ್ಬಿಕೊಂಡ ಬಾಲಕ
ರಾಯ್ಪುರ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದ ನಡುವೆ ಟೀಂ ಇಂಡಿಯಾದ ಕ್ಯಾಪ್ಟನ್ ರೋಹಿತ್ ಶರ್ಮಾರ ಅಭಿಮಾನಿ ಬಾಲಕನೋರ್ವ ಸ್ಟೇಡಿಯಂನಿಂದ ಬಂದು ಮೈದಾನದಲ್ಲಿ ಶರ್ಮಾರನ್ನು ತಬ್ಬಿಕೊಂಡಿರುವ ಘಟನೆ ನಡೆದಿದೆ.
ನ್ಯೂಜಿಲೆಂಡ್ ವಿರುದ್ಧ 2ನೇ ಏಕದಿನ ಪಂದ್ಯ ರಾಯ್ಪುರದಲ್ಲಿ ನಡೆಯುತ್ತಿತ್ತು. ಮೊದಲು ಬ್ಯಾಟಿಂಗ್ ನಡೆಸಿದ ನ್ಯೂಜಿಲೆಂಡ್ 108 ರನ್ಗಳ ಅಲ್ಪಮೊತ್ತಕ್ಕೆ ಆಲೌಟ್ ಆಯಿತು. ಆ ಬಳಿಕ ಈ ಮೊತ್ತವನ್ನು ಚೇಸಿಂಗ್ ಮಾಡಲು ಮೈದಾನಕ್ಕಿಳಿದ ರೋಹಿತ್ ಶರ್ಮಾ ಭರ್ಜರಿಯಾಗಿ ಬ್ಯಾಟ್ ಬೀಸಿದರು.




