ಕೋಲಾರದಲ್ಲಿ ಸಿದ್ದರಾಮಯ್ಯರನ್ನು ಬೂತ್ ಮಟ್ಟದಲ್ಲಿಯೇ ಬಿಜೆಪಿ ರಣತಂತ್ರ
ಬೆಂಗಳೂರು: ಕೋಲಾರ ಕಣದಲ್ಲಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯು ಸದ್ದಿಲ್ಲದೇ ಭಾರೀ ರಣತಂತ್ರ ಹೆಣೆಯುತ್ತಿದೆ. ಬೂತ್ ಮಟ್ಟದಿಂದಲೇ ಸಿದ್ದರಾಮಯ್ಯಗೆ ಖೆಡ್ಡಾ ತೋಡಲು ಸ್ಕೆಚ್ ರೂಪಿಸಲಾಗಿದೆ.
ರಾಷ್ಟ್ರೀಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ನೇತೃತ್ವದಲ್ಲಿ ಚುನಾವಣಾ ತಂತ್ರಗಾರಿಕೆ ರೂಪಿಸಲಾಗುತ್ತಿದೆ. ಕೋಲಾರದಲ್ಲಿ ಬೂತ್ ಮಟ್ಟದಲ್ಲಿ ಬಲವನ್ನು ವೃದ್ಧಿಸಿಕೊಳ್ಳುವತ್ತಾ ಬಿಜೆಪಿ ಗಮನ ಹರಿಸಿದೆ. ಕಾಂಗ್ರೆಸ್ ಜೆಡಿಎಸ್ ಪಕ್ಷಗಳ ಸ್ಥಳೀಯ ಮುಖಂಡರ ಸೇರ್ಪಡೆಗೆ ಬಿಜೆಪಿ ತನ್ನ ಬಾಗಿಲನ್ನು ತೆರೆದಿದೆ.




