February 4, 2026

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ

0
image_editor_output_image1526396463-1674717253359.jpg

ಪುತ್ತೂರು: ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

2013ರಲ್ಲಿ ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿ ಸಾಮೆತ್ತಡ್ಕದ ಕೇಶವ ಎಂಬವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಈತ ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿತ್ತು.

ಜ.25 ರಂದು ಪುತ್ತೂರು ನಗರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ..

Leave a Reply

Your email address will not be published. Required fields are marked *

You may have missed

error: Content is protected !!