ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗೆ 5 ವರ್ಷ ಶಿಕ್ಷೆ, 1.50 ಲಕ್ಷ ರೂ. ದಂಡ
ಮಂಗಳೂರು: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿದ ಪ್ರಕರಣದಲ್ಲಿ ವಲಯ ಅರಣ್ಯಾಧಿಕಾರಿಯೊಬ್ಬರಿಗೆ 5 ವರ್ಷಗಳ ಸಾದಾ ಸಜೆ ಮತ್ತು 1.50 ಲ.ರೂ. ದಂಡ ವಿಧಿಸಿ ನ್ಯಾಯಾಲಯವು ತೀರ್ಪು ನೀಡಿದೆ.
ದೇರೆಬೈಲ್ ಕೊಂಚಾಡಿ ನಿವಾಸಿ, ನಿವೃತ್ತ ವಲಯ ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿ ಶಿಕ್ಷೆಗೊಳಗಾದವರು. ಅವರು ಬೆಳ್ತಂಗಡಿ ಸಹ್ಯಾದ್ರಿ ವಲಯದ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.




