December 18, 2025

ರವಿ ಪೂಜಾರಿ ಹೆಸರಿನಲ್ಲಿ ಜೀವ ಬೆದರಿಕೆ:
ಪ್ರಕರಣವನ್ನು ಖುಲಾಸೆಗೊಳಿಸಿದ ‌ಬಂಟ್ವಾಳ ಜೆಎಂಎಫ್ಸಿ ನ್ಯಾಯಾಲಯ‌

0
Screenshot_2021-11-18-10-26-08-21_680d03679600f7af0b4c700c6b270fe7.jpg

ಬಂಟ್ವಾಳ: ವಿಟ್ಲ‌ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷಿಕರೊಬ್ಬರ ಮೊಬೈಲ್ ಗೆ ರವಿ ಪೂಜಾರಿ ಹೆಸರು ಹೇಳಿಕೊಂಡು ೨೫ ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟು ಕೊಡದೇ ಇದ್ದರೆ ಜೀವ ಬೆದರಿಕೆ ಒಡ್ಡಿರುವ ಪ್ರಕರಣವನ್ನು ‌ಬಂಟ್ವಾಳ ಜೆಎಂಎಫ್ ಸಿ ನ್ಯಾಯಾಲಯ‌ ಖುಲಾಸೆಗೊಳಿಸಿದೆ.

ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಾತೃಶ್ರೀ ಕೃಪಾ ನಿವಾಸಿ ವೆಂಕಟರಮಣ ಭಟ್ ಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಆದರೆ ಈಗ ನ್ಯಾಯಾಲಯದಲ್ಲಿ ದೂರುದಾರರು ಪ್ರಕರಣವನ್ನು ಮುಂದುವರಿಸದಿರಲು ನಿರ್ಧರಿಸಿದ ಕಾರಣ ಪ್ರಕರಣ ಖುಲಾಸೆಗೊಳ್ಳುವ ಮೂಲಕ ಇತ್ಯರ್ಥಗೊಂಡಂತಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!