ಬೆಳ್ತಂಗಡಿ: ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯ ಬಂಧನ
ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿಯೊಬ್ಬನನ್ನು ಧರ್ಮಸ್ಥಳ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಡಬ ಬರಮೇಲು ಮನೆಯ ನಿವಾಸಿ ವಿನಯ್ ಎಂದು ಗುರುತಿಸಲಾಗಿದೆ.
ಉಪ್ಪಿನಂಗಡಿ ಪೊಲೀಸ್ ಠಾಣೆ ಕಳ್ಳತನ ಪ್ರಕರಣವೊಂದರಲ್ಲಿ ಮುಖ್ಯ ಆರೋಪಿಯಾಗಿದ್ದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ಫೆ.೯ ರಂದು ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.