ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ
ನಾರಾಯಣ್ಪುರ: ಛತ್ತೀಸ್ಗಢದ ನಾರಾಯಣ್ಪುರ ಜಿಲ್ಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೀಡಾದವರನ್ನು ಬಿಜೆಪಿ ನಾರಾಯಣ್ಪುರ ಜಿಲ್ಲಾ ಘಟಕದ ಉಪಾಧ್ಯಕ್ಷ ಸಾಗರ್ ಸಾಹು ಎಂದು ಗುರುತಿಸಲಾಗಿದೆ.
ಈ ಕೃತ್ಯದ ಹಿಂದೆ ನಕ್ಸಲರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಛೋಟೆಡೊಂಗರ್ ಗ್ರಾಮದಲ್ಲಿ ತಮ್ಮ ಮನೆಯಲ್ಲಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಇಬ್ಬರು ದಾಳಿಕೋರರು ಕುಟುಂಬ ಸದಸ್ಯರ ಎದುರುಗಡೆಯೇ ಸಾಹು ಮೇಲೆ ಗುಂಡು ಹಾರಿಸಿದ್ದಾರೆ. ತಕ್ಷಣ ಅವರನ್ನು ನಾರಾಯಣ್ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಈ ವೇಳೆ ಮೃತಪಟ್ಟಿದ್ದಾರೆ.




