February 2, 2026

ಬೈಂದೂರು| ಕೆಲಸದಿಂದ ಅಮಾನತು: ಕಂಬಳ ಓಟಗಾರ ನೇಣುಬಿಗಿದು ಆತ್ಮಹತ್ಯೆ

0
image_editor_output_image1488941198-1676096039431.jpg

ಬೈಂದೂರು: ಶಿರೂರು ಟೋಲ್‌ಗೇಟ್ ಬಳಿಯ ನಿವಾಸಿ, ಕಂಬಳ ಓಟಗಾರ ಸುರೇಶ್ ಕಡಿನತಾರು (37 ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೋರ್ಟ್ ಪ್ರೋಸೆಸ್ ಹುದ್ದೆಯಲ್ಲಿದ್ದ ಅವರು ಪ್ರಸ್ತುತ ಅಮಾನುತುಗೊಂಡಿದ್ದರು. ಇದರಿಂದ ಮನ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಟೋಲ್‌ಗೇಟ್ ಹಿಂಬದಿಯ ಸರಕಾರಿ ಹಾಡಿಯಲ್ಲಿ ಸುರೇಶ್ ಅವರ ಮೃತದೇಹವು ಗೇರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!