ಕ್ರೈಂ ಸುದ್ದಿ ನಮ್ಮ ರಾಜ್ಯ ಭೀಕರ ರಸ್ತೆ ಅಪಘಾತ: ನವದಂಪತಿ ಮೃತ್ಯು reporter February 12, 2023 0 ತುಮಕೂರು: ತುಮಕೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಈ ಜೋಡಿ ಮೃತಪಟ್ಟಿದ್ದಾರೆ. ಚಿಕ್ಕನಾಯಕನಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ನವ ದಂಪತಿ ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತರನ್ನು ರಘು (35) ಮತ್ತು ಅನುಷಾ (28) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಸಾಫ್ಟ್ವೇರ್ ಇಂಜಿನಿಯರ್ಗಳಾಗಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿಯಿಂದ ಕಾರಿನಲ್ಲಿ ಬಳ್ಳಾರಿಗೆ ಸಂಬಂಧಿಕರೊಬ್ಬರ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಈ ವೇಳೆ ಹುಳಿಯಾರ್ ಗೇಟ್ ಬಳಿ ಶನಿವಾರ ಮಧ್ಯಾಹ್ನ 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. Post navigation Previous: online ಮೂಲಕ ಆರ್ಡರ್ ಮಾಡಿದ ಬ್ರೆಡ್ ಪ್ಯಾಕೆಟ್ ನಲ್ಲಿ ಸತ್ತ ಇಲಿ ಪತ್ತೆNext: ಮಡಿಕೇರಿ: ಮೀನು ಹಿಡಿಯಲು ತೆರಳಿದ್ದ ಇಬ್ಬರು ಬಾಲಕರು ನದಿಯಲ್ಲಿ ಮುಳುಗಿ ಮೃತ್ಯು More Stories ನಮ್ಮ ರಾಜ್ಯ ಶಿವಮೊಗ್ಗ: ಬೈಕ್ ಢಿಕ್ಕಿಯಾಗಿ ಪಾಲಿಕೆ ನೌಕರ ಸಾವು reporter May 14, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಪುತ್ತೂರು: ಬಿಜೆಪಿ ಮುಖಂಡನ ಪುತ್ರನಿಂದ ಹೈಕೋರ್ಟ್ ಆದೇಶ ಉಲ್ಲಂಘನೆ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಆರೋಪ reporter May 14, 2026 0 ನಮ್ಮ ಕರಾವಳಿ ನಮ್ಮ ರಾಜ್ಯ ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಶವ ಕಾರ್ಯಾಚರಣೆ: ಕಾರ್ಮಿಕರು, ಜೆಸಿಬಿ ಮಾಲಕರ 2 ಲಕ್ಷ ರೂ. ಬಾಕಿ reporter May 14, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.