ದೇವನಹಳ್ಳಿ: ಹೊತ್ತಿ ಉರಿದ ಹೋಟೆಲ್:
ಸಿಬ್ಬಂದಿಗಳು ಅಪಾಯದಿಂದ ಪಾರು
ಬೆಂಗಳೂರು: ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರೈ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷಾತ್ ಸಿಬ್ಬಂದಿಗಳು ಪಾರಾಗಿದ್ದಾರೆ.
ಅಡುಗೆ ಕೊನೆಯಲ್ಲಿ ಬೆಂಕಿ ಕಾಣಿಸಿ ಕೊಂಡು ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ ಎಂದು ತಿಳಿದು ಬಂದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸಿಬ್ಬಂದಿಗಳು ಹೊರಗೆ ಓದಿ ಬಂದು, ಅಗ್ನಿ ಶಾಮಕ ದಳಕ್ಕೆ ಸುದ್ದಿ ತಿಳಿಸಿದ್ದಾರೆ. ಮೂರು ಅಗ್ನಿ ಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.





