ಊರಿಗೆ ಬಂದಿದ್ದ ಯೋಧ ಆತ್ಮಹತ್ಯೆ
ಹಾಸನ: ಭಾರತೀಯ ಸೇನೆ ಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಹಂಪನಗುಪ್ಪೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಹರೀಶ್ ಅವರ ದ್ವಿತಿಯ ಪುತ್ರ ಹೆಚ್.ಯೋಗೇಶ್ (28) ಆತ್ಮಹತ್ಯೆಗೆ ಶರಣಾದ ಯೋಧ .
ಆತ್ಮಹತ್ಯೆಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜ.4 ರಂದು ಕರ್ತವ್ಯಕ್ಕೆ ರಜೆ ಹಾಕಿ ಗ್ರಾಮಕ್ಕೆ ಬಂದಿದ್ದ ಯೋಗೇಶ್ ಅವರು ತಮ್ಮ ಪತ್ನಿ ದೀಕ್ಷಾ ಹಾಗೂ ಕುಟುಂಬಸ್ಥರೊಂದಿಗೆ ಒಂದು ತಿಂಗಳಿಂದ ಚೆನ್ನಾಗಿದ್ದರು.




