ಚೆಕ್ ಬೌನ್ಸ್ ಪ್ರಕರಣ: ಆರೋಪಿಯಾಗಿರುವ ಕಾಂಗ್ರೆಸ್ ಮುಖಂಡ ವೈ.ಎಸ್.ವಿ ದತ್ತಾಗೆ ವಾರೆಂಟ್ ಜಾರಿ
ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ವೈ ಎಸ್ ವಿ ದತ್ತಾ ಅವರಿಗೆ ನಗರದ ನ್ಯಾಯಾಲಯವು ವಾರೆಂಟ್ ಜಾರಿ ಮಾಡಿದೆ.
ನಿತ್ಯಾನಂದ, ಸಿ.ಎಸ್ ಸೋಮೇಗೌಡ ಮತ್ತು ಪ್ರಕಾಶ್ ಜಿ.ಎಸ್ ಎಂಬವರು ಪ್ರತ್ಯೇಕವಾಗಿ ಚೆಕ್ ಬೌನ್ಸ್ ಆರೋಪದಲ್ಲಿ ಪ್ರತ್ಯೇಕ ದಾವೆ ಹೂಡಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬುಧವಾರ ಬಂಧನ ವಾರೆಂಟ್ ಜಾರಿ ಮಾಡಿದೆ.
ಬುಧವಾರ ಸಮನ್ಸ್ ಜಾರಿ ಮಾಡಿದೆ. ಮೂರು ಪ್ರತ್ಯೇಕ ಪ್ರಕರಣಗಳ ವಿಚಾರಣೆಯನ್ನು ಮಾರ್ಚ್ 27ಕ್ಕೆ ಮುಂದೂಡಲಾಗಿದೆ.




