ಟಿಪ್ಪುವನ್ನು ಹೊಡೆದು ಹಾಕಿದ ರೀತಿಯಲ್ಲಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು: ಸಚಿವ ಅಶ್ವತ್ಥನಾರಾಯಣ್
ಮಂಡ್ಯ: ಮಂಡ್ಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ ಮಂಡ್ಯ ಜನರಿಗೆ ರಾಜಕೀಯ ಬದಲಾವಣೆ ಮಾಡುವ ಶಕ್ತಿ ಇದೆ. ಮಂಡ್ಯದವರು ಮನಸ್ಸು ಮಾಡಿದ್ರೆ ಏನು ಬೇಕಾದರೂ ಸಾಧಿಸುತ್ತಾರೆ ಎಂದಿದ್ದಾರೆ.
ಮುಂದುವರಿದು ಮಾತನಾಡಿದ ಅವರು, ರಾಜಕೀಯ ದಿಕ್ಸೂಚಿ ಮಂಡ್ಯದಿಂದ ಕಾಣಬೇಕು. ಹೀಗೆ ಮಾಡಲಿಲ್ಲ ಅಂದ್ರೆ ಟಿಪ್ಪು ಸುಲ್ತಾನ್ ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬರುತ್ತಾರೆ. ನಿಮಗೆ ಟಿಪ್ಪು ಬೇಕಾ ಸಾವರ್ಕರ್ ಬೇಕಾ, ಟಿಪ್ಪು ಬೇಡಾ ಅಂದ್ರೆ ಸಿದ್ದರಾಮಯ್ಯ ಅವರನ್ನು ಟಿಪ್ಪು ಕಳುಹಿಸಿದ ಹಾಗೆ ಕಳಿಸಬೇಕು. ಹುರಿಗೌಡ, ನಂಜೇಗೌಡ ಟಿಪ್ಪುವನ್ನು ಹೊಡೆದು ಹಾಕಿದರು. ಅದೇ ರೀತಿ ಸಿದ್ದರಾಮಯ್ಯರನ್ನು ಹೊಡೆದು ಹಾಕಬೇಕು ಎಂದಿದ್ದಾರೆ.




