ಕಡಬ: ಚರಂಡಿಗೆ ಉರುಳಿ ಬಿದ್ದ ಮೊಟ್ಟೆ ಸಾಗಾಟ ಲಾರಿ
ಕಡಬ: ಕಡಬ ತಾಲೂಕಿನ ಆಲಂಕಾರು ಶರವೂರು ದೇವಾಲಯದ ಬಳಿ ಮೊಟ್ಟೆ ಸಾಗಾಟ ಲಾರಿಯೊಂದು ಚಾಲನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಚರಂಡಿಗೆ ಉರುಳಿ ಬಿದ್ಬ ಪರಿಣಾಮ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ.
ಇನ್ನು ಮೈಸೂರಿನಿಂದ ನೆಟ್ಟಣಕ್ಕೆ ಮೊಟ್ಟೆ ತಲುಪಿಸಿ ಉಳಿದ ಮೊಟ್ಟೆಗಳನ್ನು ಪುತ್ತೂರಿಗೆ ಕೊಂಡೊಯ್ಯುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ.




