ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ದಾಳಿ: ಆರೋಪಿಯ ಬಂಧನ
ರಾಮನಗರ: ಪ್ರೀತಿ ನಿರಾಕರಿಸಿದಕ್ಕೆ ವಿದ್ಯಾರ್ಥಿನಿಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಆರೋಪಿಯನ್ನು ಕನಕಪುರ ನಗರ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಈ ಸಂಬಂಧ ಕನಕಪುರ ಟೌನ್ ಠಾಣೆಯಲ್ಲಿ ಪೊಕ್ಸೊ ಅಡಿ ಪ್ರಕರಣ ದಾಖಲಾಗಿತ್ತು.
ಕನಕಪುರದ ನಿವಾಸಿ ಸುಮಂತ್ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ಸುಮಂತ ಪ್ರೀತಿಸುವಂತೆ ಪೀಡಿಸಿದ್ದು, ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಾಳೆ ಎನ್ನಲಾಗಿದೆ. ಈ ವೇಳೆ ಆರೋಪಿ ಸುಮಂತ್ ವಿದ್ಯಾರ್ಥಿನಿಯ ಮುಖಕ್ಕೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.




