December 15, 2025

ಪೂಜೆ ವಿಷಯಕ್ಕೆ ಗಲಾಟೆ: ದೇವಸ್ಥಾನದಲ್ಲಿಯೇ ಅರ್ಚಕನ ಮೇಲೆ ಗ್ರಾಮಸ್ಥರಿಂದ ಮಾರಣಾಂತಿಕ ಹಲ್ಲೆ

0
image_editor_output_image52042668-1676953855214.jpg

ಹುಬ್ಬಳ್ಳಿ: ಪೂಜೆ ವಿಷಯಕ್ಕೆ ಗಲಾಟೆ ನಡೆದು ದೇವಸ್ಥಾನದಲ್ಲಿಯೇ ಗ್ರಾಮಸ್ಥರು ಅರ್ಚಕನನ್ನು ಥಳಿಸಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಹುಬ್ಬಳ್ಳಿ ತಾಲೂಕಿನ ಕಂಪ್ಲಿಕೊಪ್ಪ ಗ್ರಾಮದಲ್ಲಿರುವ ಬಸವಣ್ಣ ದೇವಸ್ಥಾನದ ಅರ್ಚಕ ಪ್ರಕಾಶ್ ಕುಂದಗೋಳಮಠ ಮತ್ತು ಗ್ರಾಮಸ್ಥರ ನಡುವೆ ಪೂಜೆಯ ವಿಚಾರವಾಗಿ ಗಲಾಟೆ ನಡೆದಿದೆ.

ಗ್ರಾಮದ ಪ್ರಕಾಶ್ ಕುಂದಗೋಳಮಠ ಬಸವಣ್ಣ ದೇವಸ್ಥಾನದ ಅರ್ಚಕರಾಗಿ ಹಲವಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಆದರೆ ಇತ್ತೀಚೆಗೆ ಅರ್ಚಕನ ನಡವಳಿಕೆಯಲ್ಲಿ ಬದಲಾವಣೆಯಾಗಿದೆ ಎಂದು ಗ್ರಾಮಸ್ಥರು ಅಭಿಪ್ರಾಯ ಪಟ್ಟು ಹೊಸ ಅರ್ಚಕರ ನೇಮಕಕ್ಕೆ ಚಿಂತನೆ ನಡೆಸಿದ್ದರು.

ಗ್ರಾಮಸ್ಥರ ಈ ನಿರ್ಧಾರಕ್ಕೆ ಪ್ರಕಾಶ್ ಒಪ್ಪಿಗೆ ನೀಡಿರಲಿಲ್ಲ. ಈ ವಿಚಾರಕ್ಕೆ ದೇವಸ್ಥಾನ ಆವರಣದಲ್ಲಿ ಗಲಾಟೆ ಆರಂಭವಾಗಿ, ಜಗಳ ತಾರಕಕ್ಕೇರಿ ಅರ್ಚಕ ಪ್ರಕಾಶ್‌ಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ತಮ್ಮ ತಂದೆಯನ್ನು ಬಿಡಿಸಲು ಮುಂದಾದ ಅರ್ಚಕನ ಮಗನಿಗೂ ಗ್ರಾಮಸ್ಥರು ಥಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!