ಅಳಿಯನಿಂದಲೇ ಅತ್ತೆ ಕೊಲೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅಳಿಯನಿಂದಲೇ ಅತ್ತೆ ಕೊಲೆಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ ನಡೆದಿದೆ. ಏಳಲ್ ಅರಸಿ (48) ಕೊಲೆಯಾದ ಮಹಿಳೆ.
ಆರೋಪಿ ದಿವಾಕರ ಅತ್ತೆಯನ್ನು ಕೊಲೆಗೈದಿದ್ದು, ಇವರ ನಡುವಿನ ಕೌಟುಂಬಿಕ ಕಲಹ ಕೊಲೆಗೆ ಕಾರಣ ಎಂದು ಹೇಳಲಾಗುತ್ತಿದೆ.
ದಿವಾಕರನ ಹೆಂಡತಿ ತನ್ನ ಮಗುವಿನೊಂದಿಗೆ ತವರು ಮನೆಗೆ ಬಂದಿದ್ದಳು. ಆದರೆ ದಿವಾಕರ ಯಾರಿಗೂ ತಿಳಿಯದಂತೆ ಬಂದು ಮಗುವನ್ನು ಕರೆದುಕೊಂಡು ಹೋಗಿದ್ದ.
ಮಗು ಕಾಣಸದೆ ಕಂಗಾಲಾದ ಏಳಲ್ ಅರಸಿ ಹಾಗೂ ಆಕೆಯ ಮಗಳು ಮಗುವನ್ನು ಹುಡುಕಾಡಿದ್ದಾರೆ.