March 21, 2026

ಮಂಗಳೂರು: ಬಸ್ ಸಿಬ್ಬಂದಿಗಳ ನಡುವೆ ರಸ್ತೆಯಲ್ಲೇ ಹೊಡೆದಾಟ: ಇಬ್ಬರು ಪೊಲೀಸರ ವಶಕ್ಕೆ

0
20230225_221516.jpg

ಮಂಗಳೂರು: ಎರಡು ಖಾಸಗಿ ಬಸ್ಸುಗಳ ಚಾಲಕ ಸಾಗರ್ ಮತ್ತು ನಿರ್ವಾಹಕ ಸುಧೀರ್ ಹಾಗೂ ಚಾಲಕ ವಿಘ್ನೇಶ್ ಮತ್ತು ನಿರ್ವಾಹಕ ಶ್ರೀಧರ್ ಎಂಬವರು ಪಾಲನೆ ವಿಚಾರದಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಅಶೋಕ ನಗರದ ಶೇಡಿಗುರಿ ಬಸ್ ನಿಲ್ದಾಣದ ಮುಂದೆ ನಡೆದಿದೆ.

ಬಸ್ ಚಾಲಕರು ಪರಸ್ಪರ ಅಡ್ಡಾದಿಡ್ಡಿಯಾಗಿ ಬಸ್‌ಗಳನ್ನು ನಿಲ್ಲಿಸಿ ಪರಸ್ಪರ ಬೈದಾಡಿ, ತಳ್ಳಾಡುತ್ತಾ ಸಾರ್ವಜನಿಕರ ಶಾಂತಿ ನೆಮ್ಮದಿಗೆ ಭಂಗ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ಬಸ್ಸುಗಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿ ಕಾನೂನು ಕ್ರಮ ಜರಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!