September 8, 2024

ಕಾಸರಗೋಡು: ಮನೆಗಳಿಗೆ ನುಗ್ಗಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ

0

ಕಾಸರಗೋಡು: ಚಿಮೇನಿ ಪೊಲೀಸ್ ಠಾಣಾ ವ್ಯಾಪ್ತಿಯ ಕಯ್ಯೂರು ಆಲಂತಟ್ಟದಲ್ಲಿ ಹಾಡಹಗಲೇ ಮನೆಗಳ ಬೀಗ ಮುರಿದು ಚಿನ್ನಾಭರಣ ಮತ್ತು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿದ್ದಾರೆ.

ಕಾಞ೦ಗಾಡ್ ರೈಲ್ವೇ ಪರಿಸರದ ಪಿ. ಎಚ್. ಆಶಿಫ್(21) ಬಂಧಿತ ಆರೋಪಿ.

ಇನ್ನು ಫೆ.11 ಮತ್ತು 20ರಂದು ಕೃತ್ಯ ನಡೆದಿತ್ತು ಎಂದು ತಿಳಿದುಬಂದಿದೆ. ಹಾಡಹಗಲಲ್ಲೇ ಆರೋಪಿಗಳು ಮನೆಯೊಳಗೆ ನುಗ್ಗಿ ಕೃತ್ಯ ಎಸಗಿದ್ದರು.

ಈ ಬಗ್ಗೆ ಚಿಮೇನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!