ಕಾಟಿಪಳ್ಳ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣ: 3ನೇ ಆರೋಪಿ ಪವನ್ ಗೆ ಜಾಮೀನು
ಮಂಗಳೂರು: ಸುರತ್ಕಲ್ ಸಮೀಪದ ಕಾಟಿಪಳ್ಳ 4ನೇ ಬ್ಲಾಕ್ನಲ್ಲಿ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನಿಗೆ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.
ಪ್ರಕರಣದ ತನಿಖೆ ಮುನ್ನಡೆದಿದ್ದು, ಈ ನಡುವೆ ಪ್ರಕರಣದ ಮೂರನೇ ಆರೋಪಿ ಪವನ್ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಜಾಮೀನು ಕೊರಿ ಅರ್ಜಿ ಸಲ್ಲಿಸಿದ್ದ.
ಧೀರ್ಘ ವಾದ ಪ್ರತಿವಾದದ ಬಳಿಕ ಇದೀಗ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ರವೀಂದ್ರ ಜೋಷಿ ಅವರು ಗುರುವಾರ ಶರತ್ತು ಬದ್ದ ಜಾಮೀನು ಮಂಜೂರು ಮಾಡಿದ್ದಾರೆ.
ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಶ್ರೇಯಸ್ . ಎಸ್ .ಕೆ ಮತ್ತು ಹರ್ಷಿತ್ ವಾದಿಸಿದರು.




