February 4, 2026

ಬಂಟ್ವಾಳ: ಮದುವೆ ಸಿದ್ದತೆಯಲ್ಲಿದ್ದ ಅಪ್ರಾಪ್ತ ಬಾಲಕ: ಅಧಿಕಾರಿಗಳಿಂದ ಮನೆಗೆ ದಾಳಿ: ಎರಡನೇ ಬಾರಿ ಮದುವೆಗೆ ಯತ್ನ

0
IMG-20230304-WA0016.jpg

ಬಂಟ್ವಾಳ: ಅಪ್ರಾಪ್ತ ಬಾಲಕನೋರ್ವನಿಗೆ ಮದುವೆಗೆ ಸಿದ್ದತೆಯಲ್ಲಿರುವ ವೇಳೆ ಅಧಿಕಾರಿಗಳು ದಾಳಿ ನಡೆಸಿದ ಮದುವೆ ನಡೆಸದಂತೆ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕ ಕಜೆಕಾರ್ ಗ್ರಾಮದಲ್ಲಿ ನಡೆದಿದೆ.

ತೆಂಕಕಜೆಕಾರ್ ಗ್ರಾಮದ ಮಿತ್ತಳಿಕೆ ಎಂಬ ಮನೆಯಲ್ಲಿ ಅಪ್ರಾಪ್ತ ಬಾಲಕನೋರ್ವನಿಗೆ ನಾಳೆ ಮಾ.5 ರಂದು ಮದುವೆಯ ಸಕಲಸಿದ್ಧತೆಗಳನ್ನು ನಡೆದಿದ್ದು, ಅಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಮನೆಗೆ ಧಾವಿಸಿ, ಮದುವೆ ನಡೆಸದಂತೆ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಈ ಅಪ್ರಾಪ್ತ ಬಾಲಕನಿಗೆ ತಪ್ಪಿದ ಎರಡನೇಯ ಮದುವೆ. ಕಳೆದ ವರ್ಷ ಈತನಿಗೆ ಇದೇ ರೀತಿ ಮದುವೆಗಾಗಿ ಸಕಲ ಸಿದ್ದತೆಗಳು ನಡೆದಿದ್ದು, ಈ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಮನೆಗೆ ಹೋಗಿ ವಿಚಾರ ತಿಳಿಸಿ ಮದುವೆಯನ್ನು ನಿಲ್ಲಿಸಿದ್ದರು. ಇದೀಗ ಎರಡನೇ ಬಾರಿ ಅದೇ ರೀತಿ ಅಪ್ರಾಪ್ತ ಬಾಲಕನಿಗೆ ಮತ್ತೆ ಮದುವೆಗಾಗಿ ತಯಾರಿಯಲ್ಲಿದ್ದರು.

ಈ ಬಗ್ಗೆ ಮಾಹಿತಿ ತಿಳಿದ ಬಂಟ್ವಾಳ ಸಿ.ಡಿ.ಪಿ.ಒ‌‌.ಗಾಯತ್ರಿ ಕಂಬಳಿ ಅವರು ಪುಂಜಾಲಕಟ್ಟೆ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿ.ಡಿ.ಪಿ.ಒ. ಇಲಾಖೆಯ ಇತರ ಅಧಿಕಾರಿಗಳೊಂದಿಗೆ ಮನೆಗೆ ತೆರಳಿ ಮದುವೆ ನಿಲ್ಲಿಸಿದ್ದಾರೆ.

ಕಳೆದ ಬಾರಿ ಅಪ್ರಾಪ್ತ ಬಾಲಕನಿಗೆ ಮದುವೆ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂಬ ಕಾರಣಕ್ಕಾಗಿ ಪೋರ್ಜರಿ ಬರ್ತ್ ಸರ್ಟೀಪಿಕೇಟ್ ಸೃಷ್ಟಿಸಿ ಸ್ಥಳಕ್ಕೆ ಬಂದ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಲು ನೋಡಿದ್ದಾರೆ. ಆದರೆ ಅಧಿಕಾರಿಗಳು ಇವರು ನೀಡಿದ ದಾಖಲೆಗಳನ್ನು ಪರಿಶೀಲಿಸಿದಾಗ ಅದು ಸುಳ್ಳು ದಾಖಲೆ ಪತ್ರಗಳು ಎಂಬುದು ಸಾಬೀತಾಗಿದೆ. ಆ ಬಳಿಕ ಪೋಷಕರಿಗೆ ಕಾನೂನಿನ ಅಡಿಯಲ್ಲಿ ಬರುವ ವಿಚಾರಗಳನ್ನು ಮನವರಿಕೆ ಮಾಡಿದ ಅಧಿಕಾರಿಗಳು ಮದುವೆ ನಿಲ್ಲಿಸುವಂತೆ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಲು ಸೂಚನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!