March 11, 2026

ಚಿಕ್ಕಮಗಳೂರು: ಶಾಲಾ ವಿದ್ಯಾರ್ಥಿಗಳಿದ್ದ ವಾಹನ ಪಲ್ಟಿ

0
image_editor_output_image-1618827435-1678078239478.jpg

ಚಿಕ್ಕಮಗಳೂರು: ಕಾರು-ಕ್ರೂಸರ್ ಢಿಕ್ಕಿಯಾದ ಪರಿಣಾಮ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿ ಹತ್ತು ವಿಧ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ.

ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂದ ಪ್ರವಾಸಕ್ಕೆ ಬಂದಿದ್ದ ವಿಧ್ಯಾರ್ಥಿಗಳು ಪ್ರವಾಸ ಮುಗಿಸಿ ತಡರಾತ್ರಿ ಅಫಜಲ್ಪುರಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ.

ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್ ವಾಹನದಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದರು.

ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡದಿದೆ.

Leave a Reply

Your email address will not be published. Required fields are marked *

You may have missed

error: Content is protected !!