ಹುಚ್ಚು ಹೆಚ್ಚಾಗುವ ಮುನ್ನ ನಳಿನ್ ಕುಮಾರ್ ಕಟೀಲರನ್ನು ಆಸ್ಪತ್ರೆಗೆ ದಾಖಲಿಸಿ: ಕಾಂಗ್ರೆಸ್
ಬೆಂಗಳೂರು: ಮೆದುಳಿಗೂ ನಾಲಿಗೆಗೂ ಕನೆಕ್ಷನ್ ತಪ್ಪಿಹೋರುವ ನಳಿನ್ ಕುಮಾರ್ ಕಟೀಲ್ ಎಂಬ ಮಾನಸಿಕ ಅಸ್ವಸ್ಥನಿಗೆ ಚಿಕಿತ್ಸೆಯ ಅಗತ್ಯವಿದೆ. ಕಟೀಲ್ ಅವರ ಮಾನಸಿಕ ಚಿಕಿತ್ಸೆಯ ವೆಚ್ಚವನ್ನು ಕಾಂಗ್ರೆಸ್ ಭರಿಸಲು ತಯಾರಿದೆ. ಬಸವರಾಜ ಬೊಮ್ಮಾಯಿ ಅವರೇ, ಹುಚ್ಚು ಹೆಚ್ಚಾಗುವ ಮುನ್ನ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿ! ಇಲ್ಲವಾದಲ್ಲಿ ರಾಜಕೀಯ ವ್ಯವಸ್ಥೆಗೆ ಕಳಂಕ ತಪ್ಪದು’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.


