ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಜಾಗ ನೀಡಿದ್ದು ಮುಸ್ಲಿಂ ರಾಜ: ಮಿಥುನ್ ರೈ
ಮಂಗಳೂರು : ಕಾಂಗ್ರೆಸ್ ಯುವ ಮುಖಂಡ, ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಿಥುನ್ ರೈ ಅವರು ”ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಮುಸ್ಲಿಂ ರಾಜ ಜಾಗ ನೀಡಿದ್ದು” ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದು ಈ ಕುರಿತು ಹಿಂದೂ ಪರ ಸಂಘಟನೆಗಳು ಸೇರಿ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿ ತಿರುಗೇಟು ನೀಡಿದ್ದಾರೆ.
ಮೂಡಬಿದಿರೆಯ ಪುತ್ತಿಗೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಥುನ್ ರೈ ಅವರು, ಈ ಹೇಳಿಕೆ ನೀಡಿದ್ದು, ಹಿಂದೂ ಪರ ಸಂಘಟನೆಗಳು ವ್ಯಾಪಕ ಆಕ್ರೋಶ ಹೊರ ಹಾಕಿ ಸ್ಪಷ್ಟನೆ ನೀಡಲು ಕೇಳಿಕೊಂಡ ಬಳಿಕ ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ಸೌಹಾರ್ದತೆಯ ಕುರಿತು ನಾನು ಹೇಳಿಕೆ ನೀಡಿದ್ದೇನೆ ಎಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.




