February 3, 2026

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

0
image_editor_output_image-630681361-1678340711855.jpg

ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಕುಳಿತ ಸೀಟ್ನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಗರದ ಮಂತ್ರಿ ಮಾಲ್ ಬಳಿ ನಡೆದಿದೆ.

ಇಂದು ಬೆಳಗ್ಗೆ ಸುಮಾರು 61 ವರ್ಷದ ಅಬ್ದುಲ್ ಖಾದಿರ್ ಅವರು ಕೇರಳದಿಂದ ಯಶವಂತಪುರ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ್ದರು. ಹತ್ತಿರದ ಬಸ್ ಸ್ಟಾಪ್ನಲ್ಲಿ ಬಸ್ ಹತ್ತಿ ಮೆಜೆಸ್ಟಿಕ್‌ ಕಡೆಗೆ ಪ್ರಯಾಣಿಸುತ್ತಿದ್ದರು.

ಸುಮಾರು 10 ಗಂಟೆಯ ಸಮಯದಲ್ಲಿ ಬಸ್ ಮಂತ್ರಿ ಮಾಲ್ ಬಳಿ ತೆರಳುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಳಿತಿದ್ದ ಸೀಟ್ ಮೇಲೆಯೇ ಕುಸಿದು ಬಿದ್ದಿದ್ದಾರೆ. ಪ್ರಯಾಣಿಕರು ಅವರನ್ನು ನೋಡಿ ಕಂಡಕ್ಟರ್ಗೆ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

error: Content is protected !!