March 11, 2026

ಜನತೆ ಸಂಕಷ್ಟದಲ್ಲಿದ್ದಾಗ ಕರ್ನಾಟಕಕ್ಕೆ ಬಾರದ ಪ್ರಧಾನಿ ಈಗ ಬರುತ್ತಿದ್ದಾರೆ: ಮೋದಿ ವಿರುದ್ದ ಡಿ.ಕೆ ಶಿವಕುಮಾರ್ ವಾಗ್ದಾಳಿ

0
IMG-20230310-WA0012.jpg

ರಾಮನಗರ: ಈ ಮೊದಲು ರಾಜ್ಯಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣೆ ಸಮಯ ಹಾಗಾಗಿ ರಾಜ್ಯಕ್ಕೆ ಪದೇ ಪದೇ ಭೇಟಿ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಹೆದ್ದಾರಿ ನಿರ್ಮಾಣದ ಕ್ರೆಡಿಟ್ ತೆಗದುಕೊಳ್ಳುವ ಮೊದಲು ಪ್ರಯಾಣಿಕರಿಗೆ ಶೌಚಾಲಯದ ವ್ಯವಸ್ಥೆ ಸೂಕ್ತ ಸರ್ವಿಸ್ ರಸ್ತೆ ನಿರ್ಮಿಸಲಿ ದಶಪಥ ಹೆದ್ದಾರಿಗೆ ಈಗಾಗಲೇ 80 ಜನ ಬಲಿಯಾಗಿದ್ದಾರೆ ಎಂದರು.

ಚುನಾವಣೆ ಸಮಯ ಪ್ರಧಾನಿ ನರೇಂದ್ರ ಮೋದಿ ಪಾಪ ಬರಲಿ, ರಾಜ್ಯದಲ್ಲಿ ನೆರೆ ಹಾವಳಿಗೆ ಬರಲಿಲ್ಲ, ಕೋವಿಡ್ ಸಮಯದಲ್ಲಿ ಜನ ಸತ್ತಾಗ ಬರಲಿಲ್ಲ, ಬರ ಬಂದು ರಾಜ್ಯ ಸಂಕಷ್ಟಕ್ಕೆ ಸಿಲುಕಿದಾಗಲೂ ಬರಲಿಲ್ಲ ,ಕಷ್ಟ ಬಂದಾಗ ಬರಲಿಲ್ಲ, ಹಣ ಕೊಡಲು ಬರಲಿಲ್ಲ‌, ಈಗ ಚುನಾವಣೆ ಬರುವ ಹಿನ್ನಲೆಯಲ್ಲಿ ಪದೇ ಪದೇ ರಾಜ್ಯಕ್ಕೆ ಬರುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!