ಮೂಡುಬಿದಿರೆ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿ ಅರಸೀಕಟ್ಟೆ ಬಳಿ ಪಲ್ಟಿ
ಶಿರ್ವ: ಮೂಡುಬಿದಿರೆಯಿಂದ ಬ್ರಹ್ಮಾವರಕ್ಕೆ ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಶನಿವಾರ ಬೆಳಿಗ್ಗೆ ಪಲ್ಟಿಯಾಗಿದೆ.
ಈ ಪರಿಣಾಮ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ.
ಲಾರಿ ಪಲ್ಟಿಯಾದ ಪರಿಣಾಮ ಕೆಂಪು ಕಲ್ಲುಗಳು ಚೆಲ್ಲಾಪಿಲ್ಲಿಯಾಗಿ ಹರಡಿ ಬಿದ್ದಿವೆ.




