ಬೀದಿನಾಯಿಗಳ ಗುಂಪು ದಾಳಿ: ಇಬ್ಬರು ಬಾಲಕರು ಬಲಿ
ನವದೆಹಲಿ: ದೆಹಲಿಯ ನೈಋತ್ಯ ಪ್ರದೇಶದಲ್ಲಿ 7 ಮತ್ತು 5 ವರ್ಷ ವಯಸ್ಸಿನ ಸೋದರರನ್ನು ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದಿರುವ ಘಟನೆ ನಡೆದಿದೆ.
ಮೃತ ಮಕ್ಕಳನ್ನು ಆನಂದ್ ಮತ್ತು ಆತನ ಕಿರಿಯ ಸಹೋದರ ಆದಿತ್ಯ ಎಂದು ಗುರುತಿಸಲಾಗಿದೆ.
ಈ ಇಬ್ಬರೂ ಮಕ್ಕಳು ದೆಹಲಿಯ ವಸಂತ್ ಕುಂಜ್ ನಿವಾಸಿಗಳಾಗಿದ್ದು, ವಸಂತ್ ಕುಂಜ್ ಪೊಲೀಸರಿಗೆ ಮಾರ್ಚ್ 10 ರಂದು ಮಧ್ಯಾಹ್ನ 3 ಗಂಟೆಗೆ ಮಗು ಕಾಣೆಯಾಗಿರುವ ದೂರು ದಾಖಲಾಗಿತ್ತು. ತೀವ್ರ ಹುಡುಕಾಟದ ಎರಡು ಗಂಟೆಗಳ ಹುಡುಕಾಟದ ಬಳಿಕ ನಿರ್ಜನ ಪ್ರದೇಶದಲ್ಲಿನ ಗೋಡೆಯ ಬಳಿ ಆನಂದ್ ಮೃತ ದೇಹ ಪತ್ತೆಯಾಗಿದೆ.




