ತೆರೆದ ಕೊಳವೆ ಬಾವಿಗೆ ಬಿದ್ದು 5 ವರ್ಷದ ಬಾಲಕ ಮೃತ್ಯು
ಮಹಾರಾಷ್ಟ್ರ: ತೆರೆದ ಕೊಳವೆ ಬಾವಿಗೆ ಬಿದ್ದಿದ್ದ 5 ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯಲ್ಲಿ ನಡೆದಿದೆ.
ವರ್ಷದ ಸಾಗರ್ ಬುಧ ಬರೇಲಾ ಸೋಮವಾರ ಸಂಜೆ 4 ಗಂಟೆಯ ವೇಳೆಗೆ ( ಮಾ.13 ರಂದು) ಜಮೀನವೊಂದರಲ್ಲಿ ತೆರೆದ ಕೊಳವೆ ಬಿದ್ದಿದ್ದಾರೆ.
ಈ ವಿಚಾರ ಅಧಿಕಾರಿಗಳಿಗೆ ತಲುಪುತ್ತಿದ್ದಂತೆ ಎನ್ ಡಿಆರ್ ಎಫ್ ರಕ್ಷಣಾ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ಇಳಿದಿದ್ದಾರೆ.
ಆ್ಯಂಬುಲೆನ್ಸ್, ಆಕ್ಸಿಜನ್, ವೈದ್ಯರು ಎಲ್ಲರೂ ಘಟನಾ ಸ್ಥಳದಲ್ಲಿದ್ದು ಬಾಲಕನ ಚಲನವಲನವನ್ನು ಗಮನಿಸಿ ಆತನಿಗೆ ಕೃತಕ ಆಕ್ಸಿಜನ್ ನೆರವನ್ನು ನೀಡಿದ್ದಾರೆ




